ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ/ಸಹಾಯಧನ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ, ಸ್ವಾವಲಂಭಿ ಸಾರಥಿ, ಶ್ರಮಶಕ್ತಿ, ವೃತ್ತಿ ಪ್ರೋತ್ಸಾಹ, ರೇಷ್ಮೇ ನೂಲು ಬಿಚ್ಚಾಣಿಕ್ ಉದ್ಯಮಕ್ಕೆ ಪ್ರೋತ್ಸಾಹ, ಗಂಗಾ ಕಲ್ಯಾಣ, ನವೋದಯ, ಫಾಸ್ಟ್ ಫುಡ್‌ಟ್ರಕ್/ಟೈಲರ್ ಕಿಚನ್ ಫುಡ್ (ಕಿಯೋಸ್ಟ್), ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ

ಆಗಸ್ಟ್ ೨೦೨೬ವಿವಿಧ ಯೋಜನೆಯಡಿ ಸಾಲ/ಸಹಾಯಧನ : ಅಲ್ಪಸಂಖ್ಯಾತರಿAದ ಅರ್ಜಿ ಆಹ್ವಾನ ತುಮಕೂರು(ಕ.ವಾ.)ಆ.೨೫: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ/ಸಹಾಯಧನ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ, ಸ್ವಾವಲಂಭಿ ಸಾರಥಿ, ಶ್ರಮಶಕ್ತಿ, ವೃತ್ತಿ ಪ್ರೋತ್ಸಾಹ, ರೇಷ್ಮೇ ನೂಲು ಬಿಚ್ಚಾಣಿಕ್ ಉದ್ಯಮಕ್ಕೆ ಪ್ರೋತ್ಸಾಹ, ಗಂಗಾ ಕಲ್ಯಾಣ, ನವೋದಯ, ಫಾಸ್ಟ್ ಫುಡ್‌ಟ್ರಕ್/ಟೈಲರ್ ಕಿಚನ್ ಫುಡ್ (ಕಿಯೋಸ್ಟ್), ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಾಹ, ಸಿಖ್ಖ್ಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ, ಸಮುದಾಯದ ಆಧಾರಿತ ತರಬೇತಿ, ವಿದೇಶಿ ವಿದ್ಯಾಭ್ಯಾಸ ಸಾಲ, ವ್ಯಾಪಾರ / ಉದ್ದಿಮೆ ನೇರ ಸಾಲ ಹಾಗೂ ಸಾಂತ್ವನ ಯೋಜನೆಯಡಿ ಸಾಲ/ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ವೆಬ್‌ಸೈಟ್ ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸೆಪ್ಟೆಂಬರ್ ೧೭ರೊಳಗಾಗಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-೫೭೨೧೦೨ ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. *-*-*-*-*-*೨ ಅಪರಿಚಿತ ಶವ ಪತ್ತೆ : ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು ತುಮಕೂರು(ಕ.ವಾ.)ಆ.೨೫: ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆಯಾಗಿದ್ದು, ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಪ್ರಕರಣ-೧ : ಕೊತ್ತಿಪುರ ಗ್ರಾಮದ ಬಳಿ ಕುಣಿಗಲ್ ಚಿಕ್ಕಕೆರೆಯಲ್ಲಿ ಜುಲೈ ೧೬ರಂದು ಸುಮಾರು ೪೫ ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಮೃತನು ೫.೫ ಅಡಿ ಎತ್ತರ, ದೃಢಕಾಯ ಶರೀರ ಹೊಂದಿದ್ದು, ದೇಹವು ಅರ್ಧಂಬರ್ಧ ಕೊಳೆತ ಸ್ಥಿತಿಯಲ್ಲಿರುತ್ತದೆ. ಮೃತನ ಮೈಮೇಲೆ ಕಪ್ಪು ಬಣ್ಣದ ರೆಡಿಮೇಡ್ ಪ್ಯಾಂಟ್, ತುಂಬು ತೋಳಿನ ಅಂಗಿ ಇರುತ್ತದೆ. ಪ್ರಕರಣ-೨ : ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ಸರ್ಕಲ್‌ನ ಕಲ್ಲು ಬಿಲ್ಡಿಂಗ್ ಬಳಿ ಆಗಸ್ಟ್ ೮ರಂದು ಸುಮಾರು ೨೩ ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಮೃತನು ೫.೪ ಅಡಿ ಎತ್ತರ, ಸಾಧಾರಣ ಶರೀರ ಹೊಂದಿದ್ದು, ಎಡಭಾಗದ ಕುತ್ತಿಗೆಯಲ್ಲಿ Sಉ ಎಂದು ಹಚ್ಚೆ ಇರುತ್ತದೆ. ಮೃತನ ಮೈಮೇಲೆ ಬಿಳಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು, ನೀಲಿ ಮಿಶ್ರಿತ ಅರ್ಧ ತೋಳಿನ ಅಂಗಿ ಇರುತ್ತದೆ.

ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ದೂ.ವಾ.ಸಂ. ೦೮೧೩೨-೨೨೦೨೨೯, ೦೮೧೬-೨೨೭೨೪೫೧ನ್ನು ಸಂಪರ್ಕಿಸಬೇಕೆAದು ಅವರು ಮನವಿ ಮಾಡಿದ್ದಾರೆ. *-*-*-*-*-*-*ಆ.೨೮ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನತುಮಕೂರು(ಕ.ವಾ.)ಆ.೨೫: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದಾಬಸ್‌ಪೇಟೆಯ ಪ್ರೆಸಿಮೆಷರ್ ಕಂಟ್ರೋಲ್ಸ್ ಪ್ರೆöÊ. ಲಿ., ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್ ೨೮ರಂದು ಮೆಕ್ಯಾನಿಕಲ್ ಡಿಸೈನ್ ಇಂಜಿನಿಯರ್, ಎಲೆಕ್ಟಿçಕಲ್ ಡಿಸೈನ್ ಇಂಜಿನಿಯರ್, ಮೆಕ್ಯಾನಿಕಲ್ ಡಿಸೈನ್ ಇಂಜಿನಿಯರ್(ಎಸ್.ಪಿ.ಎA.), ಸರ್ವಿಸ್ ಇಂಜಿನಿಯರ್, ಪ್ರೊಡಕ್ಷನ್ ಮ್ಯಾನೇಜರ್(ಇನ್ಸ್ಟ್ರುಮೆಂಟ್ಸ್ ಪ್ರೊಡಕ್ಷನ್), ಪರ್ಚೇಸ್ ಇಂಜಿನಿಯರ್(ಮೆಟೀರಿಯಲ್ ಸರ‍್ಸಿಂಗ್), ಜಿ.ಇ.ಟಿ. ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಐ.ಟಿ.ಐ, ಡಿಪ್ಲೊಮಾ ಹಾಗೂ ಬಿ.ಇ.(ಮೆಕ್ಯಾನಿಕಲ್, ಎಲೆಕ್ಟಿçಕಲ್, ಎಲೆಕ್ಟಿçಕಲ್ & ಎಲೆಕ್ಟಾçನಿಕ್ಸ್)ನಲ್ಲಿ ಪಾಸಾದ ಮತ್ತು ೭ ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವದ ಆಧಾರದ ಮೇಲೆ ಕಂಪನಿ ನಿಗದಿಪಡಿಸಿದ ವೇತನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ ೨೮ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ. ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟಲ್ ಪಕ್ಕ, ಸೋಮೇಶ್ವರಪುರಂ, ೧೪ನೇ ಕ್ರಾಸ್, ತುಮಕೂರು-೫೭೨೧೦೨ ಇಲ್ಲಿ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೧೬-೨೨೭೮೪೮೮, ಮೊ.ಸಂ. ೮೭೯೨೬೬೯೪೧೦, ೭೭೬೦೧೭೪೫೫೪ನ್ನು ಸಂಪರ್ಕಿಸಬೇಕೆAದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *-*-*-*-*-*-*-*-*ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ ಅಭಿಯಾನಕ್ಕೆ ಚಾಲನೆತುಮಕೂರು(ಕ.ವಾ.)ಆ.೨೫: ತಾಲ್ಲೂಕಿನ ಹೊನ್ನುಡಿಕೆ ಮತ್ತು ಮಸ್ಕಲ್ ಗ್ರಾಮ ಪಂಚಾಯಿತಿಗಳಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ ಅಭಿಯಾನಕ್ಕೆ ಸಹಾಯಕ ನಿರ್ದೇಶಕ(ಗ್ರಾ.ಉ.) ಎಸ್.ಎಸ್. ಮಂಜುನಾಥ್ ಚಾಲನೆ ನೀಡಿದರು.ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಿದ್ದ ಜಾಬ್ ಕಾರ್ಡ್ ಮೇಳದಲ್ಲಿ ಗ್ರಾಮಸ್ಥರಿಗೆ ಯೋಜನೆಯ ಕುರಿತು ಮಾಹಿತಿ ನೀಡಲಾಯಿತು. ಅರ್ಹ ಕುಟುಂಬಗಳ ನೋಂದಣಿ, ಜಾಬ್ ಕಾರ್ಡ್ ವಿತರಣೆ ಹಾಗೂ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ(ಗ್ರಾ.ಉ.) ಎಸ್.ಎಸ್. ಮಂಜುನಾಥ್ ಮಾತನಾಡಿ, ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಕುಟುಂಬಗಳನ್ನು ಗುರುತಿಸಿ, ಪ್ರತಿಯೊಂದು ಕುಟುಂಬಕ್ಕೂ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಉದ್ಯೋಗದ ಅಗತ್ಯವಿರುವ ಕುಟುಂಬಗಳು ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಬೇಡಿಕೆಯನ್ನು ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಜಾಬ್ ಕಾರ್ಡ್ ಮೇಳವು ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ ಕಲ್ಪಿಸುವ ಜೊತೆಗೆ, ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಪ್ರಮುಖ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರು ಎಚ್.ಎನ್., ವಿಬಿ ಜಿ ರಾಮ್ ಜಿ ಯೋಜನೆಯ ತಾಂತ್ರಿಕ ಸಂಯೋಜಕರಾದ ಜೀವನ್ ಪ್ರಸಾದ್, ಅನ್ನಪೂರ್ಣ, ತಾಂತ್ರಿಕ ಸಹಾಯಕ ಬೋಮ್ಮೆಗೌಡ, ಬೃಂದಾ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.*-*-*-*-*-*ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಸಾವುತುಮಕೂರು(ಕ.ವಾ.)ಆ.೨೫: ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿ ಕಸಬಾ ಹೋಬಳಿ ಕೆಂಕೆರೆ ಬಳಿ ಅಸ್ವಸ್ಥನಾಗಿದ್ದ ಸುಮಾರು ೪೫ ವರ್ಷದ ವೆಂಕಟೇಶ್ ಎಂಬ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂನ್ ೧೮ರಂದು ಮೃತಪಟ್ಟಿರುತ್ತಾನೆ. ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತನು ೧೬೮ ಸೆಂ.ಮೀ. ಎತ್ತರ, ಸಾಧಾರಣ ಶರೀರ ಹೊಂದಿದ್ದು, ಕಪ್ಪು ಮೈಬಣ್ಣ ಹೊಂದಿದ್ದು, ಮೃತನ ಮೈಮೇಲೆ ಅರ್ಧ ತೋಳಿನ ಅಂಗಿ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ದೂ.ವಾ.ಸಂ. ೦೮೧೩೨-೨೨೦೨೨೯, ೦೮೧೬-೨೨೭೨೪೫೧ನ್ನು ಸಂಪರ್ಕಿಸಬೇಕೆAದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ