ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಮಂಡಿಸಿರುವ 2026-27ನೇ ಬಜೆಟ್

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಮಂಡಿಸಿರುವ 2026-27ನೇ ಬಜೆಟ್, ವಿವಿಧ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ ಆಗಿದೆ.ವಿಶೇಷವಾಗಿ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಯುವಕರಿಗೆ ಆತಂಕವಿತ್ತು. 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ. ರೈತ ಸಮುದಾಯಕ್ಕೆ 30 ಸಾವಿರ ಕೋಟಿ ರೂ. ಸಾಲ ನೀಡುವ ತೀರ್ಮಾನವನ್ನು ಬಜೆಟ್ನಲ್ಲಿ ಕೈಗೊಂಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ 15000 ಹುದ್ದೆ, ಪೊಲೀಸ್ ಇಲಾಖೆಯಲ್ಲಿ 8 ಸಾವಿರ ಹುದ್ದೆಗಳು ಹಾಗೂ ಆರೋಗ್ಯ ಇಲಾಖೆಯಲ್ಲಿ 2500 ಹುದ್ದೆಗಳ ನೇಮಕಾತಿ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂಬುದನ್ನು ಬಜೆಟ್ನಲ್ಲಿ ತಿಳಿಸಿದ್ದಾರೆ.ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧ ಮಾಡುವ ತೀರ್ಮಾನ ಒಳ್ಳೆಯ ಬೆಳವಣಿಗೆ. ತಂತ್ರಜ್ಞಾನ ಬಳಸಿ ರಾಜ್ಯಕ್ಕೆ ಸೀಮಿತವಾಗಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧಿಸಬಹುದಾಗಿದೆ.ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಿರುವ 17 ಬಾರಿ ಬಜೆಟ್ ಮಂಡಿಸಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ ಮತ್ತೊಮ್ಮೆ ಅಭಿನಂದನೆಗಳು.

