ಕರ್ನಾಟಕ ಪರಿಶಿಷ್ಟ ಜಾತಿ ಸಮುದಾಯದ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ ಕಾಂಗ್ರೆಸ್ :ತಿಪ್ಪೇಸ್ವಾಮಿ (ತಿಪ್ಪಸರ್ ನಾಯ್ಕ್) ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮ ಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ ಎಂದು ಕರ್ನಾಟಕ ಬಂಜಾರ ಜಾಗೃತಿ ದಳ(ರಿ) ಸಂಸ್ಥಾಪಕ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ(ತಿಪ್ಪಸರ್ ನಾಯ್ಕ್) ಆರೋಪಿಸಿದ್ದಾರೆ

ಪತ್ರಿಕಾ ಪ್ರಕಟಣೆ ಕೃಪೆಗಾಗಿ:ತುಮಕೂರು ಕರ್ನಾಟಕ ಪರಿಶಿಷ್ಟ ಜಾತಿ ಸಮುದಾಯದ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ ಕಾಂಗ್ರೆಸ್ :ತಿಪ್ಪೇಸ್ವಾಮಿ (ತಿಪ್ಪಸರ್ ನಾಯ್ಕ್) ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮ ಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ ಎಂದು ಕರ್ನಾಟಕ ಬಂಜಾರ ಜಾಗೃತಿ ದಳ(ರಿ) ಸಂಸ್ಥಾಪಕ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ(ತಿಪ್ಪಸರ್ ನಾಯ್ಕ್) ಆರೋಪಿಸಿದ್ದಾರೆ. ಸುಪ್ರಿಂಕೋರ್ಟ್ ಆದೇಶದ ಅನುಸಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹಂಚಿಕೆ ಮಾಡಲು ಸರಿಸುಮಾರು ಎರಡೂವರೆ ವರ್ಷಗಳವರೆಗೆ ಕಾಲಹರಣ ಮಾಡಿ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಎ, ಬಿ, ಮತ್ತು ಸಿ ವರ್ಗಗಳಾ ಗಿ ವಿಂಗಡಿಸಿದೆ. ಹಿಂದಿನ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಶೇ.15 ರಿಂದ ಶೇ.17ಕ್ಕೆ ಮೀಸಲಾತಿಯನ್ನು ಹೆಚ್ಚಿಸಿತ್ತು. ಆದರೆ ಇಂದಿನ ಸಚಿವಸಂಪುಟ ಸಭೆಯಲ್ಲಿ ‘ಎ’ ವರ್ಗಕ್ಕೆ ಬಿಜೆಪಿ ಸರ್ಕಾರವು ನೀಡಿದ್ದ ಶೇ.6ರ ಪ್ರಮಾಣ ವನ್ನುತಗ್ಗಿಸಿ ಶೇ. 5.25ಕ್ಕೆ ಹಾಗೂ ‘ಬಿ’ ವರ್ಗಕ್ಕೆ ನೀಡಲಾಗಿದ್ದ ಶೇ.5.5 ಪ್ರಮಾಣವನ್ನು ತಗ್ಗಿಸಿ ಶೇ. 5.25ಕ್ಕೆ ಇಳಿಸುವ ಮೂಲಕ ಎಡ ಮತ್ತು ಬಲ ಸಮುದಾಯಗಳಿಗೆ ಘೋರ ಅನ್ಯಾಯವನ್ನು ಎಸಗಿದೆ. ಅದೇ ರೀತಿ ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಸಮುದಾಯಗಳಿಗೆ ನೀಡಲಾಗಿದ್ದ ಶೇ. 4.5ರ ಪ್ರಮಾಣವನ್ನು ಹಾಗೂ ಪ್ರತ್ಯೇಕವಾಗಿ ಅಲೆಮಾರಿ ಸಮುದಾಯ ಗಳಿಗೆ ನೀಡಲಾಗಿದ್ದ ಶೇ.1 ಪ್ರಮಾಣವನ್ನು ರದ್ದುಗೊಳಿಸಿ ಇವೆರಡೂ ಸಮುದಾಯವನ್ನು ಒಟ್ಟುಗೂಡಿಸಿ ‘ಸಿ’ ವರ್ಗವನ್ನಾಗಿಸಿ ನ್ಯಾಯಯುತವಾಗಿ ಬರಬೇಕಾಗಿದ್ದ ಶೇ. 5.5ರ ಪ್ರಮಾಣವನ್ನು ತಗ್ಗಿಸಿ ಶೇ. 4.5ಕ್ಕೆ ಇಳಿಸಿದೆ. ಆ ಮೂಲಕ ಈ ಸಮುದಾಯಗಳ ಬೆನ್ನಿಗೂ ಚೂರಿಯನ್ನು ಹಾಕಿದೆ. ಇನ್ನೇನು ತನ್ನ ಅಧಿಕಾರವಧಿ ಕೇವಲ 2 ವರ್ಷ ಉಳಿದಿರುವಾಗ ಪರಿಶಿಷ್ಟ ಸಮುದಾಯಗಳೂ ಸೇರಿದಂತೆ ಇಡೀ ರಾಜ್ಯದ ಜನರ ಕಣ್ಣಿಗೆ ಮಣ್ಣೆರಚುವ ರೀತಿಯಲ್ಲಿ ನೇಮಕಾತಿಗೆ ಚಾಲನೆ ಕೊಡುವುದಾಗಿ ಸಮಜಾಯಿಷಿ ನೀಡಿದೆ. ಕರ್ನಾಟಕದ ಪರಿಶಿಷ್ಟ ಸಮುದಾಯಗಳಿಗೆ ಮಾಡಿರುವ ಅನ್ಯಾಯಕ್ಕೆ ಭವಿಷ್ಯದಲ್ಲಿ ಬೆಲೆ ತೆತ್ತಲೇ ಬೇಕಾಗುತ್ತದೆ ಎಂಬುದನ್ನು ಮರೆಯಬಾರದು. ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

