ಪಾವಗಡ: ತಾಲೂಕಿನ ನಿಡಗಲ್ ಹೋಬಳಿಯ ವ್ಯಾಪ್ತಿಗೆ ಬರುವ ಸಿ.ಕೆ.ಪುರ ಗ್ರಾಮದಲ್ಲಿ ದಿನಾಂಕ 24 /3/2026 ರಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ನೇತೃತ್ವದಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಪಾವಗಡ: ತಾಲೂಕಿನ ನಿಡಗಲ್ ಹೋಬಳಿಯ ವ್ಯಾಪ್ತಿಗೆ ಬರುವ ಸಿ.ಕೆ.ಪುರ ಗ್ರಾಮದಲ್ಲಿ ದಿನಾಂಕ 24 /3/2026 ರಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ನೇತೃತ್ವದಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಜಿಲ್ಲಾಧಿಕಾರಿಗಳ ‘ಜನಸಂಪರ್ಕ ಸಭೆ’ಯು ಸಾರ್ವಜನಿಕರ ಅಹವಾಲುಗಳನ್ನು ಸಲ್ಲಿಸಲು ಯಶಸ್ವಿಯಾಯಿತು, ಜನರು ತಮ್ಮ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳ ಮುಂದೆ ಸಾರ್ವಜನಿಕರು ಅವರವರ ಸಮಸ್ಯೆಗಳನ್ನು ಬಹಿರಂಗಪಡಿಸಿದರು, ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪನವರು ಜಿಲ್ಲಾ ಅಧಿಕಾರಿ ಶುಭಕಲ್ಯಾಣ ಮೇಡಂ ರವರಿಗೆ ದೂರಿನ ಪತ್ರ ಸಲ್ಲಿಸಲಾಯಿತು, ಮಾಜಿ ತಿಮ್ಮರಾಯಪ್ಪ ನವರ ಇವರ ಬೇಡಿಕೆಗಳು ಹೀಗಿತ್ತು ಪಾವಗಡ ತಾಲ್ಲೂಕಿನ ಈ ಕೆಳಕಂಡ ಕೆಲವು ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ.1. ಮರೂರು ಗ್ರಾಮದ ಪರಿಶಿಷ್ಠರಿಗೆ 1997-98ನೇ ಸಾಲಿನಲ್ಲಿ ಸರ್ಕಾರಿ ಗೋಮಾಳ ಸ.ನಂ.8. ಕಾಮತ್ತುಷ್ ಗಳಲ್ಲಿ ಜಮೀನು ಮಂಜೂರು ಮಾಡಿದ್ದು ಖಾತೆ ಪಹಣಿ ಆಗಿರುವುದು ಸರಿಯಷ್ಟೆ ಇದುವರೆಗೂ ಅವರವರ ಜಮೀನುಗಳನ್ನು ದುರಸ್ತಿ ಮಾಡಿಕೊಟ್ಟಿಲ್ಲ. ಸಣ್ಣ ಪುಟ್ಟ ಕಾರಣಗಳನ್ನು ಮುಂದೊಡ್ಡಿ ದುರಸ್ತಿಗಾಗಿ ಪರಿಶಿಷ್ಟ ಜಾತಿ ಬಡ ಕುಟುಂಬಗಳು ನಿರಂತರ ಹೋರಾಟ ಮಾಡಿಕೊಂಡು ಕಂದಾಯ ಇಲಾಖೆಗೆ ಅಲೆದಾಡುತ್ತಿದ್ದಾರೆ, ಶೀಘ್ರವಾಗಿ ಬಗೆಹರಿಸಿ ಕೊಡುವುದು.2. ನ್ಯಾಯದಗುಂಟೆ ಗ್ರಾಮದ ವ್ಯಾಪ್ತಿಯಲ್ಲಿ MSIL ಅಂಗಡಿಯನ್ನು ತೆರೆಯಬಾರದೆಂದು ಗ್ರಾಮ ಪಂಚಾಯಿತಿಯಲ್ಲಿ ಠರಾವು ಮಾಡಿದ್ದರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಬಂದ ಕೂಡಲೇ ಜನರಲ್ ಲೈಸೆನ್ಸ್ ಕೊಡಲು ಮುಂದಾಗಿದ್ದಾರೆ, ಸಾರ್ವಜನಿಕರು ದೂರು ನೀಡಿದರು ಸಹ ಸಂಬಂದ ಪಟ್ಟ ಅಧಿಕಾರಿಗಳು MSIL ಅಂಗಡಿ ತೆರೆಯಲು ಮುಂದಾಗಿರುತ್ತಾರೆ ಕೂಡಲೇ ಜನ ಪ್ರತಿನಿಧಿಗಳು ತೆಗೆದು ಕೊಂಡಿರುವ ನಿರ್ದಾರಕ್ಕೆ ಮಾನ್ಯತೆ ನೀಡಿ MSIL ಅಂಗಡಿ ತೆರೆಯದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡುವುದು.3. ಪಾವಗಡ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗಿದ್ದು ಕೆಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರುಸುತ್ತಿದ್ದಾರೆ. ಹಾಗೆ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ ಅವುಗಳ ದುರಸ್ಥಿ ಕಾರ್ಯ ಮಾಡದೆ ಸಾರ್ವಜನಿಕರಿಗೆ ತೊಂದರೆಯಾಗಿದೆ ಈ ಸಮಸ್ಯೆ ಬಗೆಹರಿಸುವುದು.4. ತುಂಗ ಭದ್ರ ನೀರು ಸರಬರಾಜು ಉದ್ಘಾಟನೆಗೊಂಡು 8 ತಿಂಗಳಾಗಿದ್ದು ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ, ಇದರ ಉಸ್ತುವಾರಿ ಹೊತ್ತಿರುವ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಂಜಿನಿಯರ್ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಅಧಿಕಾರಿಗಳು ನಿರ್ಲಷ್ಯದಿಂದ ಜನರಿಗೆ ಕುಡಿಯುವ ನೀರು ಸಿಗುತ್ತಲ್ಲ ನೀರು ಸರಬರಾಜು ಬಗ್ಗೆ ನೈಜ ಚಿತ್ರಣ ಸಾರ್ವಜನಿಕರಿಗೆ ಗೊತ್ತಾಗಿಲ್ಲ. ಕೆಲವು ಗ್ರಾಮಗಳಿಗೆ ನೀರು ಬರುತ್ತಿಲ್ಲ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಸಭೆಯನ್ನು ತಾವೇ ಕರೆದು ಸೂಕ್ತ ಸಲಹೆ ಮಾರ್ಗದರ್ಶನ ಮಾಡಿ ಕುಡಿಯುವ ನೀರಿನ ಸಮಸ್ಯೆ ಹೊಗಲಾಡಿಸುವುದು.5. ಕಂದಾಯ ಇಲಾಖೆಯಲ್ಲಿ ಪವತಿ ವಾರಸುದಾರಿಗೆ ತ್ವರಿತವಾಗಿ ಖಾತೆ ಪಹಣಿ ವಗೈರೆ ಮಾಡಿಕೊಡಲು ಆದೇಶಿಸುವುದು, ಅದರಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು.ಸಿ .ಕೆ.ಪುರದಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನಸಂಪರ್ಕ ಸಭೆ: ಸಾಲಿನಲ್ಲಿ ನಿಂತು ಜಿಲ್ಲಾಧಿಕಾರಿಗಳಿಗೆ ಅಹವಾಲು ಸಲ್ಲಿಸಿದ ಸಾರ್ವಜನಿಕರುಈಸಭೆಯಲ್ಲಿ ಸಾರ್ವಜನಿಕರು ಯಾವುದೇ ಗೊಂದಲವಿಲ್ಲದೆ ಶಿಸ್ತುಬದ್ಧವಾಗಿ ಸಾಲಿನಲ್ಲಿ ನಿಂತು ಜಿಲ್ಲಾಧಿಕಾರಿಗಳಿಗೆ ದೂರುಗಳನ್ನು ಸಲ್ಲಿಸಿದ್ದು ವಿಶೇಷವಾಗಿತ್ತು. ಹಿರಿಯ ನಾಗರಿಕರು, ಮಹಿಳೆಯರು ಮತ್ತು ರೈತರು ತಮ್ಮ ಸಾಲಿನಲ್ಲಿ ಕಾಯುತ್ತಾ, ವ್ಯವಸ್ಥಿತವಾಗಿ ಅರ್ಜಿಗಳನ್ನು ಸಲ್ಲಿಸುವ ಮೂಲಕ ಆಡಳಿತ ಯಂತ್ರದ ಮೇಲಿರುವ ನಂಬಿಕೆಯನ್ನು ಪ್ರದರ್ಶಿಸಿದರು. ಪಾವಗಡ ತಾಲೂಕಿನ ರೈತರ ಜಮೀನು ದಾಖಲೆಗಳು, ಪಹಣಿ ತಿದ್ದುಪಡಿ ಹಾಗೂ ಭೂ ಒತ್ತುವರಿ ಸಮಸ್ಯೆಗಳು, ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ಮಾಸಾಶನ ವಿಳಂಬದ ಬಗ್ಗೆ ದೂರುಗಳು ಹೊಸ ಪಡಿತರ ಚೀಟಿ ವಿತರಣೆ ಮತ್ತು ಹಾಲಿ ಕಾರ್ಡ್‌ಗಳಲ್ಲಿನ ತಿದ್ದುಪಡಿ ಪ್ರಕ್ರಿಯೆಯಲ್ಲಿನ ವಿಳಂಬದ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, “ಸರ್ಕಾರದ ಸೌಲಭ್ಯಗಳು ನೇರವಾಗಿ ಜನರ ಮನೆ ಬಾಗಿಲಿಗೆ ತಲುಪಬೇಕು. ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಿಳಂಬವಿಲ್ಲದೆ ಸೌಲಭ್ಯ ಒದಗಿಸುವುದು ನಮ್ಮ ಆದ್ಯತೆ. ಇಲ್ಲಿ ಸ್ವೀಕರಿಸಲಾದ ಪ್ರತಿಯೊಂದು ದೂರನ್ನು ಕಾಲಮಿತಿಯೊಳಗೆ ಬಗೆಹರಿಸಲಾಗುವುದು,” ಎಂದು ತಿಳಿಸಿದರು.ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಬಾಕಿ ಇರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡಲು ಮತ್ತು ಸಾರ್ವಜನಿಕರಿಗೆ ಅನಗತ್ಯ ಅಲೆದಾಟ ತಪ್ಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು, ನಿಡುಗಲ್ ಹೋಬಳಿಯ ಕಂದಾಯ ಅಧಿಕಾರಿಗಳ ವಿರುದ್ಧ ದೂರುಗಳ ಸುರಿಮಳೆಯನ್ನೇ ಸುರಿಸಿದರು. ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಮಾಸಾಶನ ತಲುಪುತ್ತಿಲ್ಲ, ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು.ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ನಿಡುಗಲ್ಲು ಹೋಬಳಿಯ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವೈಖರಿಗೆ ಸ್ಥಳದಲ್ಲೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಸರ್ಕಾರ ಬರುವ ಬಡವರಿಗಾಗಿ ನೀಡುವ ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತು ಅಂಗವಿಕಲರ ಮಾಸಾಶನದಂತಹ ಯೋಜನೆಗಳನ್ನು ತಲುಪಿಸುವಲ್ಲಿ ವಿಳಂಬ ಮಾಡುವುದು ಅಕ್ಷಮ್ಯ ಅಪರಾಧ. ಜನರ ಕೆಲಸ ಮಾಡಲು ನಿಮಗೆ ಸಂಬಳ ನೀಡಲಾಗುತ್ತಿದೆ, ಅವರನ್ನು ಕಚೇರಿಗಳಿಗೆ ಅಲೆದಾಡಿಸಲು ಅಲ್ಲ,” ಎಂದು ಜಿಲ್ಲಾಧಿಕಾರಿಗಳು ವೇದಿಕೆಯಲ್ಲೇ ಅಧಿಕಾರಿಗಳಿಗೆ ‘ಗರಂ’ ಆದರು.ಈ ಸಂದರ್ಭದಲ್ಲಿ ಮಧುಗಿರಿ ವಿಭಾಗದ ಉಪ ವಿಭಾಗಾಧಿಕಾರಿಗಳಾದ ಗುಟುರು ಶಿವಪ್ಪ, ತಹಶೀಲ್ದಾರ್ ವೈ. ರವಿ, ಕಾರ್ಯನಿರ್ವಹಣಾಧಿಕಾರಿಗಳಾದ ಮಧುಸೂದನ್ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಪ್ರತಿನಿಧಿಗಳು ಉಪಸ್ಥಿತರಿದ್ದರು.