ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದಿಂದ ಒಳ ಮೀಸಲಾತಿ ರಹಿತ ಹಳೆ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಮಾವೇಶ

ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ದಿನಾಂಕ 25.3.2026ರಂದು ಒಳ ಮೀಸಲಾತಿ ರಹಿತ ಹಳೆ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು ತುಮಕೂರು ಜಿಲ್ಲೆಯಿಂದ ಸುಮಾರು 10,000 ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದು ತುಮಕೂರು ನಗರದ ಜಯಪುರ ಬಡಾವಣೆಯಿಂದ ಶ್ರೀ ಲಕ್ಷ್ಮಿ ದೇವಿ ಟ್ರಸ್ಟ್ ಹಾಗೂ ಅಂಬೇಡ್ಕರ್ ಯುವಕ ಸಂಘ ಹಾಗೂ ಜಯಪುರ ಬಡಾವಣೆಯ ಅನೇಕ ಜನರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು. ಭಾರತದ ಸರ್ವೋಚ್ಚ ನ್ಯಾಯಾಲಯವು ದಿನಾಂಕ 1 -8 -2024 ರಂದು ಒಳ ಮೀಸಲಾತಿಯನ್ನು ನೀಡಲು ಹಾಯ ರಾಜ್ಯಗಳಿಗೆ ಅಧಿಕಾರವಿದೆಯೆಂದು ತೀರ್ಪು ನೀಡಿದ್ದು ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಉಪಜಾತಿಗಳಿಗೂ ಸೂಕ್ತ ಪ್ರಾತಿನಿತ್ಯ ಸಿಗದ ಬಗ್ಗೆ ಖಚಿತವಾದ ಅಂಕಿ ಅಂಶಗಳ ವರದಿಯ ಆಧಾರದ ಮೇಲೆ ಸದರಿ ಕೀರ್ತಿನ ಅನ್ವಯ ಕರ್ನಾಟಕ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಕೊಡಮಿಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಕ ಮಾಡಿ ಸಮೀಕ್ಷೆ ನಡೆಸಿ ವರದಿಯನ್ನು ದಿನಾಂಕ 4-8- 2025 ರಂದು ಪಡೆದು ದಿನಾಂಕ 18-8-2025 ರಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ದಿನಾಂಕ3-9-2025 ನೇರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶವು ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಮರಣ ಶಾಸನ ವಾಗಿದ್ದು ಇದನ್ನು ಕೈ ಬಿಡಬೇಕೆಂಬುದಾಗಿ ಆ ಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು ಈ ಸಂದರ್ಭದಲ್ಲಿ ಟಿ ಆರ್ ನಾಗೇಶ್ ವಕೀಲರು ಶಾಂತರಾಜು ಉಪಾಧ್ಯಕ್ಷರು ಟಿಆರ್ ಗುರುಪ್ರಸಾದ್ ಪ್ರಧಾನ ಕಾರ್ಯದರ್ಶಿ ಗುರು ಶಂಕರ್ ಮಹಾದೇವ್ ಗಿರೀಶ್ ರುದ್ರೇಶ್ ಲೋಕೇಶ್ ರಾಜು ಕೃಷ್ಣಮೂರ್ತಿ ಶಿವಶಂಕರ್ ರಾಜಣ್ಣ ಸುದರ್ಶನ್ ತ್ರಿಲೋಕ್ ಶ್ರೀಕಂಠಪ್ಪ ಶ್ರೀ ಲಕ್ಷ್ಮಿ ದೇವಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು

