ದಿಬ್ಬೂರಿನ ಒಳಚರಂಡಿ ಸಮಸ್ಯೆ ಪರಿಹರಿಸುವಂತೆ ಮನವಿತುಮಕೂರು: ನಗರದ ದಿಬ್ಬೂರು ಪ್ರದೇಶದಲ್ಲಿರುವ 370ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಎದುರಿಸುತ್ತಿರುವ ಒಳಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆಯನ್ನು ಪರಿಹರಿಸುವಂತೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ, ತುಮಕೂರು ವತಿಯಿಂದ

ದಿಬ್ಬೂರಿನ ಒಳಚರಂಡಿ ಸಮಸ್ಯೆ ಪರಿಹರಿಸುವಂತೆ ಮನವಿತುಮಕೂರು: ನಗರದ ದಿಬ್ಬೂರು ಪ್ರದೇಶದಲ್ಲಿರುವ 370ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಎದುರಿಸುತ್ತಿರುವ ಒಳಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆಯನ್ನು ಪರಿಹರಿಸುವಂತೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ, ತುಮಕೂರು ವತಿಯಿಂದ ನಗರಪಾಲಿಕೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಮಳೆ ಬಂದಾಗ ಚರಂಡಿಗಳು ತುಂಬಿ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದ್ದು, ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಮನೆಗಳಲ್ಲಿನ ವಸ್ತುಗಳು ಹಾನಿಯಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ವೇದಿಕೆ ಒತ್ತಾಯಿಸಿದೆ.